ಹರಿಹರಪಲ್ಲತ್ತಡ್ಕ | ತಲವಾರು ವದಂತಿ | ಪೊಲೀಸರ ಕಾರ್ಯಾಚರಣೆ | ಗ್ರಾಮೀಣ ಭಾಗದಲ್ಲಿ ವದಂತಿಗಳ ಕಾರುಬಾರು |

November 9, 2023
10:07 PM

ಹರಿಹರದಲ್ಲಿ ಶಂಕಿತ ವ್ಯಕ್ತಿಗಳಲ್ಲಿ ತಲವಾರು ವಂದತಿ ಸುಬ್ರಹ್ಮಣ್ಯ ಪೋಲಿಸರ ಮಿಂಚಿನ ಕಾರ್ಯಚರಣೆ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.

Advertisement
Advertisement

ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ ಎಂಬಲ್ಲಿ ರಾತ್ರಿ 8:30 ಸುಮಾರಿಗೆ ಕೇರಳ ನೊಂದವಾಣಿಯ ದ್ವಿಚಕ್ರ ವಾಹನದಲ್ಲಿ ಮೂವರು ಶಂಕಿತರು ತಲವಾರು ಹಿಡಿದುಕೊಂಡು ಓಡಿ ಹೋಗಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರೊಬ್ಬರು ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ತಿಳಿಸಿದರು.ಈ ವಿಷಯ ತಿಳಿಯುತ್ತಿದ್ದಂತೆ ಜನ ಭಯಭೀತಗೊಂಡು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡಿತ್ತು.ವಿಚಾರ ತಿಳಿದ ತಕ್ಷಣ ಸುಬ್ರಹ್ಮಣ್ಯ ಠಾಣಾಧಿಕಾರಿ ಅವರು ಘಟನಾ ಸ್ಥಳಕ್ಕೆ ಬಂದು  ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಪತ್ತೆ ಹಚ್ಚಿ ವಿಚಾರಣೆ ನಡೆಸಿದರು.

ಇವರು ಕೇರಳ ಮೂಲದವರು ಆಗಿದ್ದು ಸ್ಥಳೀಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಇವರು ಮೀನು ಹಿಡಿಯಲು ತೆರಳುವ ವೇಳೆ ಉದ್ದವಾದ ಕತ್ತಿಯನ್ನು ಕೊಂಡುಹೋದ ಕಾರಣ ಈ ರೀತಿಯ ದೂರು ಬಂದಿದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರು ದೂರು ನೀಡಿದ ಕೆಲವೇ ಸಮಯದಲ್ಲಿ ಘಟನಾ ಸ್ಥಳಕ್ಕೆ ತಕ್ಷಣ ಬಂದು ವಿಷಯನ್ನು ಬಗೆ ಹರಿಸಿದ ಸುಬ್ರಹ್ಮಣ್ಯ ಠಾಣಾಧಿಕಾರಿಯವರ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ಕೊಲ್ಲಮೊಗ್ರ,ಹರಿಹದ ಭಾಗಗಳಲ್ಲಿ ನಡೆಯುವ ಕೆಲವೊಂದು ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಅವರು ಕಾರ್ಯನಿರ್ವಹಿಸುವ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group