ಹರಿಹರಪಲ್ಲತ್ತಡ್ಕ | ತಲವಾರು ವದಂತಿ | ಪೊಲೀಸರ ಕಾರ್ಯಾಚರಣೆ | ಗ್ರಾಮೀಣ ಭಾಗದಲ್ಲಿ ವದಂತಿಗಳ ಕಾರುಬಾರು |

November 9, 2023
10:07 PM

ಹರಿಹರದಲ್ಲಿ ಶಂಕಿತ ವ್ಯಕ್ತಿಗಳಲ್ಲಿ ತಲವಾರು ವಂದತಿ ಸುಬ್ರಹ್ಮಣ್ಯ ಪೋಲಿಸರ ಮಿಂಚಿನ ಕಾರ್ಯಚರಣೆ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.

ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ ಎಂಬಲ್ಲಿ ರಾತ್ರಿ 8:30 ಸುಮಾರಿಗೆ ಕೇರಳ ನೊಂದವಾಣಿಯ ದ್ವಿಚಕ್ರ ವಾಹನದಲ್ಲಿ ಮೂವರು ಶಂಕಿತರು ತಲವಾರು ಹಿಡಿದುಕೊಂಡು ಓಡಿ ಹೋಗಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರೊಬ್ಬರು ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ತಿಳಿಸಿದರು.ಈ ವಿಷಯ ತಿಳಿಯುತ್ತಿದ್ದಂತೆ ಜನ ಭಯಭೀತಗೊಂಡು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡಿತ್ತು.ವಿಚಾರ ತಿಳಿದ ತಕ್ಷಣ ಸುಬ್ರಹ್ಮಣ್ಯ ಠಾಣಾಧಿಕಾರಿ ಅವರು ಘಟನಾ ಸ್ಥಳಕ್ಕೆ ಬಂದು  ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಪತ್ತೆ ಹಚ್ಚಿ ವಿಚಾರಣೆ ನಡೆಸಿದರು.

ಇವರು ಕೇರಳ ಮೂಲದವರು ಆಗಿದ್ದು ಸ್ಥಳೀಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಇವರು ಮೀನು ಹಿಡಿಯಲು ತೆರಳುವ ವೇಳೆ ಉದ್ದವಾದ ಕತ್ತಿಯನ್ನು ಕೊಂಡುಹೋದ ಕಾರಣ ಈ ರೀತಿಯ ದೂರು ಬಂದಿದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರು ದೂರು ನೀಡಿದ ಕೆಲವೇ ಸಮಯದಲ್ಲಿ ಘಟನಾ ಸ್ಥಳಕ್ಕೆ ತಕ್ಷಣ ಬಂದು ವಿಷಯನ್ನು ಬಗೆ ಹರಿಸಿದ ಸುಬ್ರಹ್ಮಣ್ಯ ಠಾಣಾಧಿಕಾರಿಯವರ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ಕೊಲ್ಲಮೊಗ್ರ,ಹರಿಹದ ಭಾಗಗಳಲ್ಲಿ ನಡೆಯುವ ಕೆಲವೊಂದು ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಅವರು ಕಾರ್ಯನಿರ್ವಹಿಸುವ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ
March 12, 2025
10:13 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |
March 12, 2025
10:03 PM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror