ಹರಿಹರದಲ್ಲಿ ಶಂಕಿತ ವ್ಯಕ್ತಿಗಳಲ್ಲಿ ತಲವಾರು ವಂದತಿ ಸುಬ್ರಹ್ಮಣ್ಯ ಪೋಲಿಸರ ಮಿಂಚಿನ ಕಾರ್ಯಚರಣೆ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.
ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ ಎಂಬಲ್ಲಿ ರಾತ್ರಿ 8:30 ಸುಮಾರಿಗೆ ಕೇರಳ ನೊಂದವಾಣಿಯ ದ್ವಿಚಕ್ರ ವಾಹನದಲ್ಲಿ ಮೂವರು ಶಂಕಿತರು ತಲವಾರು ಹಿಡಿದುಕೊಂಡು ಓಡಿ ಹೋಗಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರೊಬ್ಬರು ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ತಿಳಿಸಿದರು.ಈ ವಿಷಯ ತಿಳಿಯುತ್ತಿದ್ದಂತೆ ಜನ ಭಯಭೀತಗೊಂಡು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡಿತ್ತು.ವಿಚಾರ ತಿಳಿದ ತಕ್ಷಣ ಸುಬ್ರಹ್ಮಣ್ಯ ಠಾಣಾಧಿಕಾರಿ ಅವರು ಘಟನಾ ಸ್ಥಳಕ್ಕೆ ಬಂದು ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಪತ್ತೆ ಹಚ್ಚಿ ವಿಚಾರಣೆ ನಡೆಸಿದರು.
ಇವರು ಕೇರಳ ಮೂಲದವರು ಆಗಿದ್ದು ಸ್ಥಳೀಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಇವರು ಮೀನು ಹಿಡಿಯಲು ತೆರಳುವ ವೇಳೆ ಉದ್ದವಾದ ಕತ್ತಿಯನ್ನು ಕೊಂಡುಹೋದ ಕಾರಣ ಈ ರೀತಿಯ ದೂರು ಬಂದಿದೆ ಎಂದು ತಿಳಿದು ಬಂದಿದೆ.
ಸಾರ್ವಜನಿಕರು ದೂರು ನೀಡಿದ ಕೆಲವೇ ಸಮಯದಲ್ಲಿ ಘಟನಾ ಸ್ಥಳಕ್ಕೆ ತಕ್ಷಣ ಬಂದು ವಿಷಯನ್ನು ಬಗೆ ಹರಿಸಿದ ಸುಬ್ರಹ್ಮಣ್ಯ ಠಾಣಾಧಿಕಾರಿಯವರ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ಕೊಲ್ಲಮೊಗ್ರ,ಹರಿಹದ ಭಾಗಗಳಲ್ಲಿ ನಡೆಯುವ ಕೆಲವೊಂದು ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಅವರು ಕಾರ್ಯನಿರ್ವಹಿಸುವ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಾರೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…