Advertisement
ಸುದ್ದಿಗಳು

ಹರಿಹರಪಲ್ಲತ್ತಡ್ಕ | ತಲವಾರು ವದಂತಿ | ಪೊಲೀಸರ ಕಾರ್ಯಾಚರಣೆ | ಗ್ರಾಮೀಣ ಭಾಗದಲ್ಲಿ ವದಂತಿಗಳ ಕಾರುಬಾರು |

Share

ಹರಿಹರದಲ್ಲಿ ಶಂಕಿತ ವ್ಯಕ್ತಿಗಳಲ್ಲಿ ತಲವಾರು ವಂದತಿ ಸುಬ್ರಹ್ಮಣ್ಯ ಪೋಲಿಸರ ಮಿಂಚಿನ ಕಾರ್ಯಚರಣೆ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.

ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ ಎಂಬಲ್ಲಿ ರಾತ್ರಿ 8:30 ಸುಮಾರಿಗೆ ಕೇರಳ ನೊಂದವಾಣಿಯ ದ್ವಿಚಕ್ರ ವಾಹನದಲ್ಲಿ ಮೂವರು ಶಂಕಿತರು ತಲವಾರು ಹಿಡಿದುಕೊಂಡು ಓಡಿ ಹೋಗಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರೊಬ್ಬರು ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ತಿಳಿಸಿದರು.ಈ ವಿಷಯ ತಿಳಿಯುತ್ತಿದ್ದಂತೆ ಜನ ಭಯಭೀತಗೊಂಡು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡಿತ್ತು.ವಿಚಾರ ತಿಳಿದ ತಕ್ಷಣ ಸುಬ್ರಹ್ಮಣ್ಯ ಠಾಣಾಧಿಕಾರಿ ಅವರು ಘಟನಾ ಸ್ಥಳಕ್ಕೆ ಬಂದು  ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಪತ್ತೆ ಹಚ್ಚಿ ವಿಚಾರಣೆ ನಡೆಸಿದರು.

ಇವರು ಕೇರಳ ಮೂಲದವರು ಆಗಿದ್ದು ಸ್ಥಳೀಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಇವರು ಮೀನು ಹಿಡಿಯಲು ತೆರಳುವ ವೇಳೆ ಉದ್ದವಾದ ಕತ್ತಿಯನ್ನು ಕೊಂಡುಹೋದ ಕಾರಣ ಈ ರೀತಿಯ ದೂರು ಬಂದಿದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರು ದೂರು ನೀಡಿದ ಕೆಲವೇ ಸಮಯದಲ್ಲಿ ಘಟನಾ ಸ್ಥಳಕ್ಕೆ ತಕ್ಷಣ ಬಂದು ವಿಷಯನ್ನು ಬಗೆ ಹರಿಸಿದ ಸುಬ್ರಹ್ಮಣ್ಯ ಠಾಣಾಧಿಕಾರಿಯವರ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ಕೊಲ್ಲಮೊಗ್ರ,ಹರಿಹದ ಭಾಗಗಳಲ್ಲಿ ನಡೆಯುವ ಕೆಲವೊಂದು ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಅವರು ಕಾರ್ಯನಿರ್ವಹಿಸುವ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

4 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

13 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

20 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago