ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ ಕಂಡುಬರುವ ಹೆಚ್ಚಿನ ಸಮುದ್ರ ಕಸಕ್ಕೆ ಇದು ಕಾರಣವಾಗಿದೆ ಎಂದು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಹೇಳಿದೆ. ತೆಳುವಾದ, ಏಕ-ಬಳಕೆಯ ಚೀಲಗಳು ಪ್ರಾಣಿಗಳು ಸಿಕ್ಕಿಹಾಕಿಕೊಂಡಾಗ ಅಥವಾ ಪ್ಲಾಸ್ಟಿಕ್ ಅನ್ನು ಸೇವಿಸಿದಾಗ ಜಲಚರಗಳಿಗೆ ಹಾನಿ ಮಾಡುತ್ತವೆ ಮತ್ತು ಅವುಗಳ ಸಾವಿಗೆ ಕಾರಣವಾಗುತ್ತದೆ ಎಂದು ವಿಶ್ವಸಂಸ್ಥೆ ಹೇಳುತ್ತದೆ.
ಪ್ಲಾಸ್ಟಿಕ್ ಚೀಲಗಳ ನಿಷೇಧ ಮತ್ತು ದಂಡ ವಿಧಿಸುವುದು ಈ ಸಮಸ್ಯೆಯನ್ನು ನಿವಾರಿಸಲು ಕ್ರಮವಾಗುತ್ತಿದೆ.ಈ ಮೂಲಕ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡುವುದು ಮತ್ತು ನೀರನ್ನು ತಲಪುವುದನ್ನು ತಡೆಯುವ ಗುರಿ ಇಲ್ಲಿ ಹೊಂದಲಾಗಿದೆ. ಸೈನ್ಸ್ ಜರ್ನಲ್ನಲ್ಲಿ ಪ್ರಕಟವಾದ ಹೊಸ ಅಧ್ಯಯನವು ಈ ನೀತಿಗಳು ವ್ಯಾಪಕವಾಗಿ ಪರಿಣಾಮಕಾರಿಯಾಗಿವೆ ಎಂದು ಹೇಳಿದೆ.
ಪ್ಲಾಸ್ಟಿಕ್ ಚೀಲಗಳ ನಿಷೇಧ ಮತ್ತು ತೆರಿಗೆಗಳ ಪರಿಣಾಮಗಳ ಬಗ್ಗೆ ನಿರ್ಣಯಿಸಲು ಸಂಶೋಧಕರು 45,000 ಕ್ಕೂ ಹೆಚ್ಚು ತೀರ ಪ್ರದೇಶಗಳ ಶುಚಿಗೊಳಿಸುವಿಕೆಯಿಂದ ರಾಷ್ಟ್ರವ್ಯಾಪಿ ಡೇಟಾಗಳನ್ನು ಪರಿಶೀಲಿಸಿದರು. ಅವರು 2017 ಮತ್ತು 2023 ರ ನಡುವೆ ಯುನೈಟೆಡ್ ಸ್ಟೇಟ್ಸ್ನಾದ್ಯಂತ ಜಾರಿಗೆ ತಂದ ನೂರಾರು ರಾಜ್ಯ ಮತ್ತು ಸ್ಥಳೀಯ ಪ್ಲಾಸ್ಟಿಕ್ ನೀತಿಗಳನ್ನು ಗಮನಿಸಿದರು. ಈ ಮಾದರಿಗಳನ್ನು ಇತರ ಪ್ರದೇಶಗಳಿಗೆ ಹೋಲಿಸಿದರು. ಪ್ಲಾಸ್ಟಿಕ್ ಚೀಲಗಳ ನೀತಿಗಳು – ಪಾಲಿಸಿಗಳು ಇಲ್ಲದ ಪ್ರದೇಶಗಳಿಗೆ ಹೋಲಿಸಿದರೆ ಸಂಗ್ರಹಿಸಿದ ಒಟ್ಟು ವಸ್ತುಗಳ ಪ್ರಮಾಣದಲ್ಲಿ ಪ್ಲಾಸ್ಟಿಕ್ ಚೀಲಗಳ ಪಾಲು 25% ರಿಂದ 47% ರಷ್ಟು ಕಡಿಮೆಯಾಗಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.
ಪ್ಲಾಸ್ಟಿಕ್ ಚೀಲಗಳ ಮೇಲಿನ ನೀತಿಗಳೇ ಪ್ಲಾಸ್ಟಿಕ್ ನಿಯಂತ್ರಣ ಮಾಡಲು ಪರಿಣಾಮಕಾರಿ ಎಂಬುದಕ್ಕೆ ಪುರಾವೆಗಳಿವೆ.ಹೀಗಾಗಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಸರಿಯಾದ ನೀತಿ ನಿಯಮಗಳೇ ಅಗತ್ಯವಾಗಿದೆ.ಪರಿಸರ ಉಳಿವಿನ ದೃಷ್ಟಿಯಿಂದ ಇಂತಹದ್ದೊಂದು ನೀತಿಗಳ ಅಗತ್ಯ ಇದೆ ಎನ್ನುವುದು ವರದಿಯ ಫಲಿತಾಂಶ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…