Advertisement
Uncategorized

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

Share

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ ಕಂಡುಬರುವ ಹೆಚ್ಚಿನ ಸಮುದ್ರ ಕಸಕ್ಕೆ ಇದು ಕಾರಣವಾಗಿದೆ ಎಂದು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಹೇಳಿದೆ. ತೆಳುವಾದ, ಏಕ-ಬಳಕೆಯ ಚೀಲಗಳು ಪ್ರಾಣಿಗಳು ಸಿಕ್ಕಿಹಾಕಿಕೊಂಡಾಗ ಅಥವಾ ಪ್ಲಾಸ್ಟಿಕ್ ಅನ್ನು ಸೇವಿಸಿದಾಗ ಜಲಚರಗಳಿಗೆ ಹಾನಿ ಮಾಡುತ್ತವೆ ಮತ್ತು ಅವುಗಳ ಸಾವಿಗೆ ಕಾರಣವಾಗುತ್ತದೆ  ಎಂದು ವಿಶ್ವಸಂಸ್ಥೆ ಹೇಳುತ್ತದೆ.

ಪ್ಲಾಸ್ಟಿಕ್ ಚೀಲಗಳ ನಿಷೇಧ ಮತ್ತು ದಂಡ ವಿಧಿಸುವುದು ಈ ಸಮಸ್ಯೆಯನ್ನು ನಿವಾರಿಸಲು ಕ್ರಮವಾಗುತ್ತಿದೆ.ಈ ಮೂಲಕ  ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡುವುದು ಮತ್ತು ನೀರನ್ನು ತಲಪುವುದನ್ನು ತಡೆಯುವ ಗುರಿ ಇಲ್ಲಿ ಹೊಂದಲಾಗಿದೆ. ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನವು ಈ ನೀತಿಗಳು ವ್ಯಾಪಕವಾಗಿ ಪರಿಣಾಮಕಾರಿಯಾಗಿವೆ ಎಂದು ಹೇಳಿದೆ.

ಪ್ಲಾಸ್ಟಿಕ್ ಚೀಲಗಳ ನಿಷೇಧ ಮತ್ತು ತೆರಿಗೆಗಳ ಪರಿಣಾಮಗಳ ಬಗ್ಗೆ ನಿರ್ಣಯಿಸಲು ಸಂಶೋಧಕರು 45,000 ಕ್ಕೂ ಹೆಚ್ಚು ತೀರ ಪ್ರದೇಶಗಳ ಶುಚಿಗೊಳಿಸುವಿಕೆಯಿಂದ ರಾಷ್ಟ್ರವ್ಯಾಪಿ ಡೇಟಾಗಳನ್ನು ಪರಿಶೀಲಿಸಿದರು. ಅವರು 2017 ಮತ್ತು 2023 ರ ನಡುವೆ ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ಜಾರಿಗೆ ತಂದ ನೂರಾರು ರಾಜ್ಯ ಮತ್ತು ಸ್ಥಳೀಯ ಪ್ಲಾಸ್ಟಿಕ್ ನೀತಿಗಳನ್ನು ಗಮನಿಸಿದರು. ಈ ಮಾದರಿಗಳನ್ನು  ಇತರ ಪ್ರದೇಶಗಳಿಗೆ ಹೋಲಿಸಿದರು. ಪ್ಲಾಸ್ಟಿಕ್ ಚೀಲಗಳ ನೀತಿಗಳು – ಪಾಲಿಸಿಗಳು ಇಲ್ಲದ ಪ್ರದೇಶಗಳಿಗೆ ಹೋಲಿಸಿದರೆ ಸಂಗ್ರಹಿಸಿದ ಒಟ್ಟು ವಸ್ತುಗಳ ಪ್ರಮಾಣದಲ್ಲಿ ಪ್ಲಾಸ್ಟಿಕ್ ಚೀಲಗಳ ಪಾಲು 25% ರಿಂದ 47% ರಷ್ಟು ಕಡಿಮೆಯಾಗಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಪ್ಲಾಸ್ಟಿಕ್ ಚೀಲಗಳ ಮೇಲಿನ ನೀತಿಗಳೇ ಪ್ಲಾಸ್ಟಿಕ್‌ ನಿಯಂತ್ರಣ ಮಾಡಲು ಪರಿಣಾಮಕಾರಿ ಎಂಬುದಕ್ಕೆ ಪುರಾವೆಗಳಿವೆ.ಹೀಗಾಗಿ ಪ್ಲಾಸ್ಟಿಕ್‌ ನಿಯಂತ್ರಣಕ್ಕೆ ಸರಿಯಾದ ನೀತಿ ನಿಯಮಗಳೇ ಅಗತ್ಯವಾಗಿದೆ.ಪರಿಸರ ಉಳಿವಿನ ದೃಷ್ಟಿಯಿಂದ ಇಂತಹದ್ದೊಂದು ನೀತಿಗಳ ಅಗತ್ಯ ಇದೆ ಎನ್ನುವುದು ವರದಿಯ ಫಲಿತಾಂಶ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

2 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago