Advertisement
Uncategorized

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

Share

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ ಕಂಡುಬರುವ ಹೆಚ್ಚಿನ ಸಮುದ್ರ ಕಸಕ್ಕೆ ಇದು ಕಾರಣವಾಗಿದೆ ಎಂದು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಹೇಳಿದೆ. ತೆಳುವಾದ, ಏಕ-ಬಳಕೆಯ ಚೀಲಗಳು ಪ್ರಾಣಿಗಳು ಸಿಕ್ಕಿಹಾಕಿಕೊಂಡಾಗ ಅಥವಾ ಪ್ಲಾಸ್ಟಿಕ್ ಅನ್ನು ಸೇವಿಸಿದಾಗ ಜಲಚರಗಳಿಗೆ ಹಾನಿ ಮಾಡುತ್ತವೆ ಮತ್ತು ಅವುಗಳ ಸಾವಿಗೆ ಕಾರಣವಾಗುತ್ತದೆ  ಎಂದು ವಿಶ್ವಸಂಸ್ಥೆ ಹೇಳುತ್ತದೆ.

ಪ್ಲಾಸ್ಟಿಕ್ ಚೀಲಗಳ ನಿಷೇಧ ಮತ್ತು ದಂಡ ವಿಧಿಸುವುದು ಈ ಸಮಸ್ಯೆಯನ್ನು ನಿವಾರಿಸಲು ಕ್ರಮವಾಗುತ್ತಿದೆ.ಈ ಮೂಲಕ  ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡುವುದು ಮತ್ತು ನೀರನ್ನು ತಲಪುವುದನ್ನು ತಡೆಯುವ ಗುರಿ ಇಲ್ಲಿ ಹೊಂದಲಾಗಿದೆ. ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನವು ಈ ನೀತಿಗಳು ವ್ಯಾಪಕವಾಗಿ ಪರಿಣಾಮಕಾರಿಯಾಗಿವೆ ಎಂದು ಹೇಳಿದೆ.

ಪ್ಲಾಸ್ಟಿಕ್ ಚೀಲಗಳ ನಿಷೇಧ ಮತ್ತು ತೆರಿಗೆಗಳ ಪರಿಣಾಮಗಳ ಬಗ್ಗೆ ನಿರ್ಣಯಿಸಲು ಸಂಶೋಧಕರು 45,000 ಕ್ಕೂ ಹೆಚ್ಚು ತೀರ ಪ್ರದೇಶಗಳ ಶುಚಿಗೊಳಿಸುವಿಕೆಯಿಂದ ರಾಷ್ಟ್ರವ್ಯಾಪಿ ಡೇಟಾಗಳನ್ನು ಪರಿಶೀಲಿಸಿದರು. ಅವರು 2017 ಮತ್ತು 2023 ರ ನಡುವೆ ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ಜಾರಿಗೆ ತಂದ ನೂರಾರು ರಾಜ್ಯ ಮತ್ತು ಸ್ಥಳೀಯ ಪ್ಲಾಸ್ಟಿಕ್ ನೀತಿಗಳನ್ನು ಗಮನಿಸಿದರು. ಈ ಮಾದರಿಗಳನ್ನು  ಇತರ ಪ್ರದೇಶಗಳಿಗೆ ಹೋಲಿಸಿದರು. ಪ್ಲಾಸ್ಟಿಕ್ ಚೀಲಗಳ ನೀತಿಗಳು – ಪಾಲಿಸಿಗಳು ಇಲ್ಲದ ಪ್ರದೇಶಗಳಿಗೆ ಹೋಲಿಸಿದರೆ ಸಂಗ್ರಹಿಸಿದ ಒಟ್ಟು ವಸ್ತುಗಳ ಪ್ರಮಾಣದಲ್ಲಿ ಪ್ಲಾಸ್ಟಿಕ್ ಚೀಲಗಳ ಪಾಲು 25% ರಿಂದ 47% ರಷ್ಟು ಕಡಿಮೆಯಾಗಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಪ್ಲಾಸ್ಟಿಕ್ ಚೀಲಗಳ ಮೇಲಿನ ನೀತಿಗಳೇ ಪ್ಲಾಸ್ಟಿಕ್‌ ನಿಯಂತ್ರಣ ಮಾಡಲು ಪರಿಣಾಮಕಾರಿ ಎಂಬುದಕ್ಕೆ ಪುರಾವೆಗಳಿವೆ.ಹೀಗಾಗಿ ಪ್ಲಾಸ್ಟಿಕ್‌ ನಿಯಂತ್ರಣಕ್ಕೆ ಸರಿಯಾದ ನೀತಿ ನಿಯಮಗಳೇ ಅಗತ್ಯವಾಗಿದೆ.ಪರಿಸರ ಉಳಿವಿನ ದೃಷ್ಟಿಯಿಂದ ಇಂತಹದ್ದೊಂದು ನೀತಿಗಳ ಅಗತ್ಯ ಇದೆ ಎನ್ನುವುದು ವರದಿಯ ಫಲಿತಾಂಶ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

10 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

18 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago