ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿದ್ದರಿಂದ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ ಘಟನೆಯೊಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ವಡೆಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ವಡೆಘಟ್ಟ ಗ್ರಾಮದ ಕೆರೆಗೆ ವಿಷ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಜೋಡಿ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಚಂದನ್ ಎಂಬವರು ಮೀನು ಸಾಕಾಣಿಕೆ ಮಾಡಲು ಕೆರೆಯನ್ನು ಗುತ್ತಿಗೆ ಪಡೆದಿದ್ದರು.
ಕಳೆದ ಎರಡು ತಿಂಗಳ ಹಿಂದೆ ಬರೋಬ್ಬರಿ ಐದುವರೆ ಲಕ್ಷ ಮೀನಿನ ಮರಿಗಳನ್ನು ಕೆರೆಗೆ ಬಿಟ್ಟಿದ್ದರು. ಹಗಲು ರಾತ್ರಿ ನಿದ್ದೆಗೆಟ್ಟು ಮೀನುಗಳನ್ನು ಸಾಕಿದರು. ಆದರೆ, ರಾಜಕೀಯ ದ್ವೇಷಕ್ಕೆ ನಿನ್ನೆ ರಾತ್ರಿ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ವಿಕೃತಿ ಮೆರೆದಿದ್ದಾರೆ.
ಕೆರೆಗೆ ವಿಷ ಮಿಶ್ರಣವಾದ ಹಿನ್ನೆಲೆ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳೆಲ್ಲ ಸಾವನ್ನಪ್ಪಿವೆ. ಭಾನುವಾರ ಬೆಳಗ್ಗೆ ಗ್ರಾಮಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…