ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೈನಲ್ ಸಭೆ!

May 25, 2023
12:26 PM

ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿಗೆ ಬಿದ್ದಿದ್ದಾರೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ.

ಒಟ್ಟಾರೆ ಸಚಿವ ಸಂಪುಟದಲ್ಲಿ (34 ಸ್ಥಾನ) ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯತರಿಗೆ ಆರು, ಒಕ್ಕಲಿಗರಿಗೆ ಐದು, ಪರಿಶಿಷ್ಟರಿಗೆ 5, ಪರಿಶಿಷ್ಟಪಂಗಡಕ್ಕೆ 2, ಹಿಂದುಳಿದವರಿಗೆ 4, ಮುಸ್ಲಿಂ – 3, ಕುರುಬ -3, ಕ್ರೈಸ್ತರು, ಜೈನ, ಬ್ರಾಹ್ಮಣದಂತಹ ಸಮುದಾಯಗಳಿಗೆ ತಲಾ ಒಂದು ಸ್ಥಾನ ನೀಡುವ ಸಾಧ್ಯತೆಯಿದ್ದು, ಮೂರು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳುವ ಸಾಧ್ಯತೆಯಿದೆ. ಸದ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಂಪುಟದಲ್ಲಿ 10 ಮಂದಿ ಇದ್ದು, ಬಾಕಿ ಉಳಿದ 24ರ ಪೈಕಿ 20 ಸ್ಥಾನಗಳನ್ನು ತುಂಬಿಕೊಳ್ಳುವ ಉದ್ದೇಶವಿದೆ. ಆದರೆ, ಒತ್ತಡ ತೀವ್ರವಾದರೆ ಇದು 21 ಅಥವಾ 22ಕ್ಕೂ ಹೆಚ್ಚಬಹುದು ಎಂದು ಮೂಲಗಳು ಹೇಳುತ್ತವೆ.

ಇಂದು ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ವೇಣುಗೋಪಾಲ್ ನಿವಾಸದಲ್ಲಿ ಹೈಕಮಾಂಡ್ ಮೀಟಿಂಗ್ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಫೈನಲ್ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ
February 17, 2025
9:27 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ | ಸಚಿವ ಅಶ್ವಿನಿ ವೈಷ್ಣವ್
February 16, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror