ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೈನಲ್ ಸಭೆ!

May 25, 2023
12:26 PM

ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿಗೆ ಬಿದ್ದಿದ್ದಾರೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ.

ಒಟ್ಟಾರೆ ಸಚಿವ ಸಂಪುಟದಲ್ಲಿ (34 ಸ್ಥಾನ) ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯತರಿಗೆ ಆರು, ಒಕ್ಕಲಿಗರಿಗೆ ಐದು, ಪರಿಶಿಷ್ಟರಿಗೆ 5, ಪರಿಶಿಷ್ಟಪಂಗಡಕ್ಕೆ 2, ಹಿಂದುಳಿದವರಿಗೆ 4, ಮುಸ್ಲಿಂ – 3, ಕುರುಬ -3, ಕ್ರೈಸ್ತರು, ಜೈನ, ಬ್ರಾಹ್ಮಣದಂತಹ ಸಮುದಾಯಗಳಿಗೆ ತಲಾ ಒಂದು ಸ್ಥಾನ ನೀಡುವ ಸಾಧ್ಯತೆಯಿದ್ದು, ಮೂರು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳುವ ಸಾಧ್ಯತೆಯಿದೆ. ಸದ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಂಪುಟದಲ್ಲಿ 10 ಮಂದಿ ಇದ್ದು, ಬಾಕಿ ಉಳಿದ 24ರ ಪೈಕಿ 20 ಸ್ಥಾನಗಳನ್ನು ತುಂಬಿಕೊಳ್ಳುವ ಉದ್ದೇಶವಿದೆ. ಆದರೆ, ಒತ್ತಡ ತೀವ್ರವಾದರೆ ಇದು 21 ಅಥವಾ 22ಕ್ಕೂ ಹೆಚ್ಚಬಹುದು ಎಂದು ಮೂಲಗಳು ಹೇಳುತ್ತವೆ.

ಇಂದು ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ವೇಣುಗೋಪಾಲ್ ನಿವಾಸದಲ್ಲಿ ಹೈಕಮಾಂಡ್ ಮೀಟಿಂಗ್ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಫೈನಲ್ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror