ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿಗೆ ಬಿದ್ದಿದ್ದಾರೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ.
ಒಟ್ಟಾರೆ ಸಚಿವ ಸಂಪುಟದಲ್ಲಿ (34 ಸ್ಥಾನ) ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯತರಿಗೆ ಆರು, ಒಕ್ಕಲಿಗರಿಗೆ ಐದು, ಪರಿಶಿಷ್ಟರಿಗೆ 5, ಪರಿಶಿಷ್ಟಪಂಗಡಕ್ಕೆ 2, ಹಿಂದುಳಿದವರಿಗೆ 4, ಮುಸ್ಲಿಂ – 3, ಕುರುಬ -3, ಕ್ರೈಸ್ತರು, ಜೈನ, ಬ್ರಾಹ್ಮಣದಂತಹ ಸಮುದಾಯಗಳಿಗೆ ತಲಾ ಒಂದು ಸ್ಥಾನ ನೀಡುವ ಸಾಧ್ಯತೆಯಿದ್ದು, ಮೂರು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳುವ ಸಾಧ್ಯತೆಯಿದೆ. ಸದ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಂಪುಟದಲ್ಲಿ 10 ಮಂದಿ ಇದ್ದು, ಬಾಕಿ ಉಳಿದ 24ರ ಪೈಕಿ 20 ಸ್ಥಾನಗಳನ್ನು ತುಂಬಿಕೊಳ್ಳುವ ಉದ್ದೇಶವಿದೆ. ಆದರೆ, ಒತ್ತಡ ತೀವ್ರವಾದರೆ ಇದು 21 ಅಥವಾ 22ಕ್ಕೂ ಹೆಚ್ಚಬಹುದು ಎಂದು ಮೂಲಗಳು ಹೇಳುತ್ತವೆ.
ಇಂದು ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ವೇಣುಗೋಪಾಲ್ ನಿವಾಸದಲ್ಲಿ ಹೈಕಮಾಂಡ್ ಮೀಟಿಂಗ್ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಫೈನಲ್ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…