ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿಗೆ ಬಿದ್ದಿದ್ದಾರೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ.
ಒಟ್ಟಾರೆ ಸಚಿವ ಸಂಪುಟದಲ್ಲಿ (34 ಸ್ಥಾನ) ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯತರಿಗೆ ಆರು, ಒಕ್ಕಲಿಗರಿಗೆ ಐದು, ಪರಿಶಿಷ್ಟರಿಗೆ 5, ಪರಿಶಿಷ್ಟಪಂಗಡಕ್ಕೆ 2, ಹಿಂದುಳಿದವರಿಗೆ 4, ಮುಸ್ಲಿಂ – 3, ಕುರುಬ -3, ಕ್ರೈಸ್ತರು, ಜೈನ, ಬ್ರಾಹ್ಮಣದಂತಹ ಸಮುದಾಯಗಳಿಗೆ ತಲಾ ಒಂದು ಸ್ಥಾನ ನೀಡುವ ಸಾಧ್ಯತೆಯಿದ್ದು, ಮೂರು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳುವ ಸಾಧ್ಯತೆಯಿದೆ. ಸದ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಂಪುಟದಲ್ಲಿ 10 ಮಂದಿ ಇದ್ದು, ಬಾಕಿ ಉಳಿದ 24ರ ಪೈಕಿ 20 ಸ್ಥಾನಗಳನ್ನು ತುಂಬಿಕೊಳ್ಳುವ ಉದ್ದೇಶವಿದೆ. ಆದರೆ, ಒತ್ತಡ ತೀವ್ರವಾದರೆ ಇದು 21 ಅಥವಾ 22ಕ್ಕೂ ಹೆಚ್ಚಬಹುದು ಎಂದು ಮೂಲಗಳು ಹೇಳುತ್ತವೆ.
ಇಂದು ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ವೇಣುಗೋಪಾಲ್ ನಿವಾಸದಲ್ಲಿ ಹೈಕಮಾಂಡ್ ಮೀಟಿಂಗ್ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಫೈನಲ್ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…