ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿಗೆ ಬಿದ್ದಿದ್ದಾರೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ.
ಒಟ್ಟಾರೆ ಸಚಿವ ಸಂಪುಟದಲ್ಲಿ (34 ಸ್ಥಾನ) ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯತರಿಗೆ ಆರು, ಒಕ್ಕಲಿಗರಿಗೆ ಐದು, ಪರಿಶಿಷ್ಟರಿಗೆ 5, ಪರಿಶಿಷ್ಟಪಂಗಡಕ್ಕೆ 2, ಹಿಂದುಳಿದವರಿಗೆ 4, ಮುಸ್ಲಿಂ – 3, ಕುರುಬ -3, ಕ್ರೈಸ್ತರು, ಜೈನ, ಬ್ರಾಹ್ಮಣದಂತಹ ಸಮುದಾಯಗಳಿಗೆ ತಲಾ ಒಂದು ಸ್ಥಾನ ನೀಡುವ ಸಾಧ್ಯತೆಯಿದ್ದು, ಮೂರು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳುವ ಸಾಧ್ಯತೆಯಿದೆ. ಸದ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಂಪುಟದಲ್ಲಿ 10 ಮಂದಿ ಇದ್ದು, ಬಾಕಿ ಉಳಿದ 24ರ ಪೈಕಿ 20 ಸ್ಥಾನಗಳನ್ನು ತುಂಬಿಕೊಳ್ಳುವ ಉದ್ದೇಶವಿದೆ. ಆದರೆ, ಒತ್ತಡ ತೀವ್ರವಾದರೆ ಇದು 21 ಅಥವಾ 22ಕ್ಕೂ ಹೆಚ್ಚಬಹುದು ಎಂದು ಮೂಲಗಳು ಹೇಳುತ್ತವೆ.
ಇಂದು ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ವೇಣುಗೋಪಾಲ್ ನಿವಾಸದಲ್ಲಿ ಹೈಕಮಾಂಡ್ ಮೀಟಿಂಗ್ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಫೈನಲ್ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…