Advertisement
Political mirror

ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೈನಲ್ ಸಭೆ!

Share

ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿಗೆ ಬಿದ್ದಿದ್ದಾರೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ.

ಒಟ್ಟಾರೆ ಸಚಿವ ಸಂಪುಟದಲ್ಲಿ (34 ಸ್ಥಾನ) ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯತರಿಗೆ ಆರು, ಒಕ್ಕಲಿಗರಿಗೆ ಐದು, ಪರಿಶಿಷ್ಟರಿಗೆ 5, ಪರಿಶಿಷ್ಟಪಂಗಡಕ್ಕೆ 2, ಹಿಂದುಳಿದವರಿಗೆ 4, ಮುಸ್ಲಿಂ – 3, ಕುರುಬ -3, ಕ್ರೈಸ್ತರು, ಜೈನ, ಬ್ರಾಹ್ಮಣದಂತಹ ಸಮುದಾಯಗಳಿಗೆ ತಲಾ ಒಂದು ಸ್ಥಾನ ನೀಡುವ ಸಾಧ್ಯತೆಯಿದ್ದು, ಮೂರು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳುವ ಸಾಧ್ಯತೆಯಿದೆ. ಸದ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಂಪುಟದಲ್ಲಿ 10 ಮಂದಿ ಇದ್ದು, ಬಾಕಿ ಉಳಿದ 24ರ ಪೈಕಿ 20 ಸ್ಥಾನಗಳನ್ನು ತುಂಬಿಕೊಳ್ಳುವ ಉದ್ದೇಶವಿದೆ. ಆದರೆ, ಒತ್ತಡ ತೀವ್ರವಾದರೆ ಇದು 21 ಅಥವಾ 22ಕ್ಕೂ ಹೆಚ್ಚಬಹುದು ಎಂದು ಮೂಲಗಳು ಹೇಳುತ್ತವೆ.

ಇಂದು ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ವೇಣುಗೋಪಾಲ್ ನಿವಾಸದಲ್ಲಿ ಹೈಕಮಾಂಡ್ ಮೀಟಿಂಗ್ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಫೈನಲ್ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

8 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

12 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago