ಕ್ಷಮೆ ಯಾಚಿಸದೇ ಇದ್ದರೆ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗುವುದು :ಹರೀಶ್‌ ಕುಮಾರ್‌

May 26, 2023
10:33 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಕ್ಷಮೆ ಯಾಚಿಸಬೇಕು.ಇಲ್ಲದಿದ್ದರೆ ಅವರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌  ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಹರೀಶ್ ಕುಮಾರ್‌ ಅವರು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಮೇ 22 ರಂದು ವಿಜಯೋತ್ಸವ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಈ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಪಕ್ಷ ಕಾನೂನಾತ್ಮಕವಾಗಿ ಚರ್ಚಿಸಿದೆ. ಪ್ರಥಮವಾಗಿ ಠಾಣೆಗಳಲ್ಲಿ ಪ್ರಕರಣ ದಾಖಲಿಸುವ ಕೆಲಸ ನಡೆಯುತ್ತದೆ. ಹರೀಶ್‌ ಪೂಂಜಾ ಕ್ಷಮೆ ಯಾಚಿಸದಿದ್ದರೆ, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಮಾನ ನಷ್ಠ ಮೊಕದ್ದಮೆ ದಾಖಲಿಸಲಾಗುವುದು ಎ೦ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror