ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಕ್ಷಮೆ ಯಾಚಿಸಬೇಕು.ಇಲ್ಲದಿದ್ದರೆ ಅವರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಹರೀಶ್ ಕುಮಾರ್ ಅವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೇ 22 ರಂದು ವಿಜಯೋತ್ಸವ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಪಕ್ಷ ಕಾನೂನಾತ್ಮಕವಾಗಿ ಚರ್ಚಿಸಿದೆ. ಪ್ರಥಮವಾಗಿ ಠಾಣೆಗಳಲ್ಲಿ ಪ್ರಕರಣ ದಾಖಲಿಸುವ ಕೆಲಸ ನಡೆಯುತ್ತದೆ. ಹರೀಶ್ ಪೂಂಜಾ ಕ್ಷಮೆ ಯಾಚಿಸದಿದ್ದರೆ, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಮಾನ ನಷ್ಠ ಮೊಕದ್ದಮೆ ದಾಖಲಿಸಲಾಗುವುದು ಎ೦ದರು.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…