Political mirror

ಕಾಂಗ್ರೆಸ್‌ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಿಗೆ ಖರ್ಚು ಎಷ್ಟು ಗೊತ್ತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಐದು ಗ್ಯಾರಂಟಿಗಳಲ್ಲೊಂದಾದ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ‘ಗೃಹಜ್ಯೋತಿ’ ಯೋಜನೆಗೆ ಮಾಸಿಕ 1955 ಕೋಟಿ ರು.ನಂತೆ ವಾರ್ಷಿಕ ಅಂದಾಜು 23,400 ಕೋಟಿ ರು. ಅನುದಾನ ಅಗತ್ಯವಿದೆ ಎಂಬ ಮಾಹಿತಿಯನ್ನು ವರದಿಯಲ್ಲಿ ತಿಳಿಸಿದೆ. ಇದರೊಂದಿಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆಯೇ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಲಿದೆ. ಐದೂ ಗ್ಯಾರಂಟಿಗಳ ಜಾರಿಗೆ 50 ಸಾವಿರ ರು. ಕೋಟಿ ರು. ಅಂದಾಜಿಸಿರುವ ಸರ್ಕಾರಕ್ಕೆ ಇದರ ಅರ್ಧದಷ್ಟುಅನುದಾನ ಗೃಹಜ್ಯೋತಿ ಒಂದೇ ಯೋಜನೆಗೆ ಬೇಕಾಗುತ್ತದೆ.

Advertisement
Advertisement

ಮುಖ್ಯಮಂತ್ರಿಗಳ ಸೂಚನೆಯಂತೆ ಇಂಧನ ಇಲಾಖೆಯು ಬೆಸ್ಕಾಂ, ಚೆಸ್ಕಾಂ ಸೇರಿದಂತೆ ತನ್ನೆಲ್ಲಾ ವಿದ್ಯುತ್‌ ಸರಬರಾಜು ನಿಗಮಗಳಿಂದ ಮಾಸಿಕ 200 ಯುನಿಟ್‌ನೊಳಗೆ ವಿದ್ಯುತ್‌ ಬಳಕೆದಾರರ ಮಾಹಿತಿ ಸಂಗ್ರಹಿಸಿದೆ. ಆ ಪ್ರಕಾರ, ರಾಜ್ಯದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 86 ಲಕ್ಷ, ಚೆಸ್ಕಾಂನಡಿ 20 ಲಕ್ಷ, ಮೆಸ್ಕಾಂ ವ್ಯಾಪ್ತಿಯಲ್ಲಿ 15 ಲಕ್ಷ, ಹೆಸ್ಕಾಂ ವ್ಯಾಪ್ತಿಯಲ್ಲಿ 28 ಲಕ್ಷ ಹಾಗೂ ಜೆಸ್ಕಾ ಅಡಿ 19 ಲಕ್ಷ ಸಂಪರ್ಕಗಳು ಸೇರಿ ಒಟ್ಟಾರೆ ಎಲ್ಲಾ ನಿಗಮಗಳ ಅಡಿ 1.70 ಕೋಟಿ ವಿದ್ಯುತ್‌ ಸಂಪರ್ಕಗಳಿದ್ದು, ಈ ಪೈಕಿ 1.20 ಕೋಟಿಯಷ್ಟು ಬಳಕೆದಾರರು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರಾಗಿದ್ದಾರೆ.

ಇವರೆಲ್ಲರಿಗೂ ಗೃಹಜ್ಯೋತಿ ಯೋಜನೆ ಜಾರಿಗೆ ಮಾಸಿಕ 1955 ಕೋಟಿ ರು.ನಂತೆ 23,400 ಕೋಟಿ ರು.ಗಳಷ್ಟುಅನುದಾನ ಬೇಕೆಂದು ತಿಳಿಸಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಗೃಹ ಬಳಕೆ ವಿದ್ಯುತ್‌ಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೇರೆ ಬೇರೆ ರೀತಿಯ ದರ ನಿಗದಿಪಡಿಸಲಾಗಿದೆ. ಆ ಪ್ರಕಾರ ಗೃಹಜ್ಯೋತಿ ಯೋಜನೆ ಜಾರಿಯಿಂದ ಮಾಸಿಕ ಗರಿಷ್ಠ 200 ಯುನಿಟ್‌ವರೆಗೆ ವಿದ್ಯುತ್‌ ಬಳಸುವ ಫಲಾನುಭವಿಗೆ ಗ್ರಾಮೀಣ ಭಾಗದಲ್ಲಿ 1000 ರು., ನಗರ ಪ್ರದೇಶದಲ್ಲಿ 1200 ರು. ನಷ್ಟುಉಳಿತಾಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

10 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

13 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

23 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago