Advertisement
Political mirror

ಕಾಂಗ್ರೆಸ್‌ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಿಗೆ ಖರ್ಚು ಎಷ್ಟು ಗೊತ್ತ

Share

ಐದು ಗ್ಯಾರಂಟಿಗಳಲ್ಲೊಂದಾದ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ‘ಗೃಹಜ್ಯೋತಿ’ ಯೋಜನೆಗೆ ಮಾಸಿಕ 1955 ಕೋಟಿ ರು.ನಂತೆ ವಾರ್ಷಿಕ ಅಂದಾಜು 23,400 ಕೋಟಿ ರು. ಅನುದಾನ ಅಗತ್ಯವಿದೆ ಎಂಬ ಮಾಹಿತಿಯನ್ನು ವರದಿಯಲ್ಲಿ ತಿಳಿಸಿದೆ. ಇದರೊಂದಿಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆಯೇ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಲಿದೆ. ಐದೂ ಗ್ಯಾರಂಟಿಗಳ ಜಾರಿಗೆ 50 ಸಾವಿರ ರು. ಕೋಟಿ ರು. ಅಂದಾಜಿಸಿರುವ ಸರ್ಕಾರಕ್ಕೆ ಇದರ ಅರ್ಧದಷ್ಟುಅನುದಾನ ಗೃಹಜ್ಯೋತಿ ಒಂದೇ ಯೋಜನೆಗೆ ಬೇಕಾಗುತ್ತದೆ.

ಮುಖ್ಯಮಂತ್ರಿಗಳ ಸೂಚನೆಯಂತೆ ಇಂಧನ ಇಲಾಖೆಯು ಬೆಸ್ಕಾಂ, ಚೆಸ್ಕಾಂ ಸೇರಿದಂತೆ ತನ್ನೆಲ್ಲಾ ವಿದ್ಯುತ್‌ ಸರಬರಾಜು ನಿಗಮಗಳಿಂದ ಮಾಸಿಕ 200 ಯುನಿಟ್‌ನೊಳಗೆ ವಿದ್ಯುತ್‌ ಬಳಕೆದಾರರ ಮಾಹಿತಿ ಸಂಗ್ರಹಿಸಿದೆ. ಆ ಪ್ರಕಾರ, ರಾಜ್ಯದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 86 ಲಕ್ಷ, ಚೆಸ್ಕಾಂನಡಿ 20 ಲಕ್ಷ, ಮೆಸ್ಕಾಂ ವ್ಯಾಪ್ತಿಯಲ್ಲಿ 15 ಲಕ್ಷ, ಹೆಸ್ಕಾಂ ವ್ಯಾಪ್ತಿಯಲ್ಲಿ 28 ಲಕ್ಷ ಹಾಗೂ ಜೆಸ್ಕಾ ಅಡಿ 19 ಲಕ್ಷ ಸಂಪರ್ಕಗಳು ಸೇರಿ ಒಟ್ಟಾರೆ ಎಲ್ಲಾ ನಿಗಮಗಳ ಅಡಿ 1.70 ಕೋಟಿ ವಿದ್ಯುತ್‌ ಸಂಪರ್ಕಗಳಿದ್ದು, ಈ ಪೈಕಿ 1.20 ಕೋಟಿಯಷ್ಟು ಬಳಕೆದಾರರು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರಾಗಿದ್ದಾರೆ.

ಇವರೆಲ್ಲರಿಗೂ ಗೃಹಜ್ಯೋತಿ ಯೋಜನೆ ಜಾರಿಗೆ ಮಾಸಿಕ 1955 ಕೋಟಿ ರು.ನಂತೆ 23,400 ಕೋಟಿ ರು.ಗಳಷ್ಟುಅನುದಾನ ಬೇಕೆಂದು ತಿಳಿಸಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಗೃಹ ಬಳಕೆ ವಿದ್ಯುತ್‌ಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೇರೆ ಬೇರೆ ರೀತಿಯ ದರ ನಿಗದಿಪಡಿಸಲಾಗಿದೆ. ಆ ಪ್ರಕಾರ ಗೃಹಜ್ಯೋತಿ ಯೋಜನೆ ಜಾರಿಯಿಂದ ಮಾಸಿಕ ಗರಿಷ್ಠ 200 ಯುನಿಟ್‌ವರೆಗೆ ವಿದ್ಯುತ್‌ ಬಳಸುವ ಫಲಾನುಭವಿಗೆ ಗ್ರಾಮೀಣ ಭಾಗದಲ್ಲಿ 1000 ರು., ನಗರ ಪ್ರದೇಶದಲ್ಲಿ 1200 ರು. ನಷ್ಟುಉಳಿತಾಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

11 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

11 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

15 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago