Advertisement
Political mirror

ಕಾಂಗ್ರೆಸ್‌ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಿಗೆ ಖರ್ಚು ಎಷ್ಟು ಗೊತ್ತ

Share

ಐದು ಗ್ಯಾರಂಟಿಗಳಲ್ಲೊಂದಾದ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ‘ಗೃಹಜ್ಯೋತಿ’ ಯೋಜನೆಗೆ ಮಾಸಿಕ 1955 ಕೋಟಿ ರು.ನಂತೆ ವಾರ್ಷಿಕ ಅಂದಾಜು 23,400 ಕೋಟಿ ರು. ಅನುದಾನ ಅಗತ್ಯವಿದೆ ಎಂಬ ಮಾಹಿತಿಯನ್ನು ವರದಿಯಲ್ಲಿ ತಿಳಿಸಿದೆ. ಇದರೊಂದಿಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆಯೇ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಲಿದೆ. ಐದೂ ಗ್ಯಾರಂಟಿಗಳ ಜಾರಿಗೆ 50 ಸಾವಿರ ರು. ಕೋಟಿ ರು. ಅಂದಾಜಿಸಿರುವ ಸರ್ಕಾರಕ್ಕೆ ಇದರ ಅರ್ಧದಷ್ಟುಅನುದಾನ ಗೃಹಜ್ಯೋತಿ ಒಂದೇ ಯೋಜನೆಗೆ ಬೇಕಾಗುತ್ತದೆ.

ಮುಖ್ಯಮಂತ್ರಿಗಳ ಸೂಚನೆಯಂತೆ ಇಂಧನ ಇಲಾಖೆಯು ಬೆಸ್ಕಾಂ, ಚೆಸ್ಕಾಂ ಸೇರಿದಂತೆ ತನ್ನೆಲ್ಲಾ ವಿದ್ಯುತ್‌ ಸರಬರಾಜು ನಿಗಮಗಳಿಂದ ಮಾಸಿಕ 200 ಯುನಿಟ್‌ನೊಳಗೆ ವಿದ್ಯುತ್‌ ಬಳಕೆದಾರರ ಮಾಹಿತಿ ಸಂಗ್ರಹಿಸಿದೆ. ಆ ಪ್ರಕಾರ, ರಾಜ್ಯದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 86 ಲಕ್ಷ, ಚೆಸ್ಕಾಂನಡಿ 20 ಲಕ್ಷ, ಮೆಸ್ಕಾಂ ವ್ಯಾಪ್ತಿಯಲ್ಲಿ 15 ಲಕ್ಷ, ಹೆಸ್ಕಾಂ ವ್ಯಾಪ್ತಿಯಲ್ಲಿ 28 ಲಕ್ಷ ಹಾಗೂ ಜೆಸ್ಕಾ ಅಡಿ 19 ಲಕ್ಷ ಸಂಪರ್ಕಗಳು ಸೇರಿ ಒಟ್ಟಾರೆ ಎಲ್ಲಾ ನಿಗಮಗಳ ಅಡಿ 1.70 ಕೋಟಿ ವಿದ್ಯುತ್‌ ಸಂಪರ್ಕಗಳಿದ್ದು, ಈ ಪೈಕಿ 1.20 ಕೋಟಿಯಷ್ಟು ಬಳಕೆದಾರರು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರಾಗಿದ್ದಾರೆ.

ಇವರೆಲ್ಲರಿಗೂ ಗೃಹಜ್ಯೋತಿ ಯೋಜನೆ ಜಾರಿಗೆ ಮಾಸಿಕ 1955 ಕೋಟಿ ರು.ನಂತೆ 23,400 ಕೋಟಿ ರು.ಗಳಷ್ಟುಅನುದಾನ ಬೇಕೆಂದು ತಿಳಿಸಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಗೃಹ ಬಳಕೆ ವಿದ್ಯುತ್‌ಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೇರೆ ಬೇರೆ ರೀತಿಯ ದರ ನಿಗದಿಪಡಿಸಲಾಗಿದೆ. ಆ ಪ್ರಕಾರ ಗೃಹಜ್ಯೋತಿ ಯೋಜನೆ ಜಾರಿಯಿಂದ ಮಾಸಿಕ ಗರಿಷ್ಠ 200 ಯುನಿಟ್‌ವರೆಗೆ ವಿದ್ಯುತ್‌ ಬಳಸುವ ಫಲಾನುಭವಿಗೆ ಗ್ರಾಮೀಣ ಭಾಗದಲ್ಲಿ 1000 ರು., ನಗರ ಪ್ರದೇಶದಲ್ಲಿ 1200 ರು. ನಷ್ಟುಉಳಿತಾಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

7 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago