Advertisement
Political mirror

ಕಾಂಗ್ರೆಸ್‌ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಿಗೆ ಖರ್ಚು ಎಷ್ಟು ಗೊತ್ತ

Share

ಐದು ಗ್ಯಾರಂಟಿಗಳಲ್ಲೊಂದಾದ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ‘ಗೃಹಜ್ಯೋತಿ’ ಯೋಜನೆಗೆ ಮಾಸಿಕ 1955 ಕೋಟಿ ರು.ನಂತೆ ವಾರ್ಷಿಕ ಅಂದಾಜು 23,400 ಕೋಟಿ ರು. ಅನುದಾನ ಅಗತ್ಯವಿದೆ ಎಂಬ ಮಾಹಿತಿಯನ್ನು ವರದಿಯಲ್ಲಿ ತಿಳಿಸಿದೆ. ಇದರೊಂದಿಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆಯೇ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಲಿದೆ. ಐದೂ ಗ್ಯಾರಂಟಿಗಳ ಜಾರಿಗೆ 50 ಸಾವಿರ ರು. ಕೋಟಿ ರು. ಅಂದಾಜಿಸಿರುವ ಸರ್ಕಾರಕ್ಕೆ ಇದರ ಅರ್ಧದಷ್ಟುಅನುದಾನ ಗೃಹಜ್ಯೋತಿ ಒಂದೇ ಯೋಜನೆಗೆ ಬೇಕಾಗುತ್ತದೆ.

ಮುಖ್ಯಮಂತ್ರಿಗಳ ಸೂಚನೆಯಂತೆ ಇಂಧನ ಇಲಾಖೆಯು ಬೆಸ್ಕಾಂ, ಚೆಸ್ಕಾಂ ಸೇರಿದಂತೆ ತನ್ನೆಲ್ಲಾ ವಿದ್ಯುತ್‌ ಸರಬರಾಜು ನಿಗಮಗಳಿಂದ ಮಾಸಿಕ 200 ಯುನಿಟ್‌ನೊಳಗೆ ವಿದ್ಯುತ್‌ ಬಳಕೆದಾರರ ಮಾಹಿತಿ ಸಂಗ್ರಹಿಸಿದೆ. ಆ ಪ್ರಕಾರ, ರಾಜ್ಯದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 86 ಲಕ್ಷ, ಚೆಸ್ಕಾಂನಡಿ 20 ಲಕ್ಷ, ಮೆಸ್ಕಾಂ ವ್ಯಾಪ್ತಿಯಲ್ಲಿ 15 ಲಕ್ಷ, ಹೆಸ್ಕಾಂ ವ್ಯಾಪ್ತಿಯಲ್ಲಿ 28 ಲಕ್ಷ ಹಾಗೂ ಜೆಸ್ಕಾ ಅಡಿ 19 ಲಕ್ಷ ಸಂಪರ್ಕಗಳು ಸೇರಿ ಒಟ್ಟಾರೆ ಎಲ್ಲಾ ನಿಗಮಗಳ ಅಡಿ 1.70 ಕೋಟಿ ವಿದ್ಯುತ್‌ ಸಂಪರ್ಕಗಳಿದ್ದು, ಈ ಪೈಕಿ 1.20 ಕೋಟಿಯಷ್ಟು ಬಳಕೆದಾರರು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರಾಗಿದ್ದಾರೆ.

ಇವರೆಲ್ಲರಿಗೂ ಗೃಹಜ್ಯೋತಿ ಯೋಜನೆ ಜಾರಿಗೆ ಮಾಸಿಕ 1955 ಕೋಟಿ ರು.ನಂತೆ 23,400 ಕೋಟಿ ರು.ಗಳಷ್ಟುಅನುದಾನ ಬೇಕೆಂದು ತಿಳಿಸಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಗೃಹ ಬಳಕೆ ವಿದ್ಯುತ್‌ಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೇರೆ ಬೇರೆ ರೀತಿಯ ದರ ನಿಗದಿಪಡಿಸಲಾಗಿದೆ. ಆ ಪ್ರಕಾರ ಗೃಹಜ್ಯೋತಿ ಯೋಜನೆ ಜಾರಿಯಿಂದ ಮಾಸಿಕ ಗರಿಷ್ಠ 200 ಯುನಿಟ್‌ವರೆಗೆ ವಿದ್ಯುತ್‌ ಬಳಸುವ ಫಲಾನುಭವಿಗೆ ಗ್ರಾಮೀಣ ಭಾಗದಲ್ಲಿ 1000 ರು., ನಗರ ಪ್ರದೇಶದಲ್ಲಿ 1200 ರು. ನಷ್ಟುಉಳಿತಾಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago