Advertisement
Political mirror

ಕಾಂಗ್ರೆಸ್‌ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಿಗೆ ಖರ್ಚು ಎಷ್ಟು ಗೊತ್ತ

Share

ಐದು ಗ್ಯಾರಂಟಿಗಳಲ್ಲೊಂದಾದ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ‘ಗೃಹಜ್ಯೋತಿ’ ಯೋಜನೆಗೆ ಮಾಸಿಕ 1955 ಕೋಟಿ ರು.ನಂತೆ ವಾರ್ಷಿಕ ಅಂದಾಜು 23,400 ಕೋಟಿ ರು. ಅನುದಾನ ಅಗತ್ಯವಿದೆ ಎಂಬ ಮಾಹಿತಿಯನ್ನು ವರದಿಯಲ್ಲಿ ತಿಳಿಸಿದೆ. ಇದರೊಂದಿಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆಯೇ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಲಿದೆ. ಐದೂ ಗ್ಯಾರಂಟಿಗಳ ಜಾರಿಗೆ 50 ಸಾವಿರ ರು. ಕೋಟಿ ರು. ಅಂದಾಜಿಸಿರುವ ಸರ್ಕಾರಕ್ಕೆ ಇದರ ಅರ್ಧದಷ್ಟುಅನುದಾನ ಗೃಹಜ್ಯೋತಿ ಒಂದೇ ಯೋಜನೆಗೆ ಬೇಕಾಗುತ್ತದೆ.

ಮುಖ್ಯಮಂತ್ರಿಗಳ ಸೂಚನೆಯಂತೆ ಇಂಧನ ಇಲಾಖೆಯು ಬೆಸ್ಕಾಂ, ಚೆಸ್ಕಾಂ ಸೇರಿದಂತೆ ತನ್ನೆಲ್ಲಾ ವಿದ್ಯುತ್‌ ಸರಬರಾಜು ನಿಗಮಗಳಿಂದ ಮಾಸಿಕ 200 ಯುನಿಟ್‌ನೊಳಗೆ ವಿದ್ಯುತ್‌ ಬಳಕೆದಾರರ ಮಾಹಿತಿ ಸಂಗ್ರಹಿಸಿದೆ. ಆ ಪ್ರಕಾರ, ರಾಜ್ಯದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 86 ಲಕ್ಷ, ಚೆಸ್ಕಾಂನಡಿ 20 ಲಕ್ಷ, ಮೆಸ್ಕಾಂ ವ್ಯಾಪ್ತಿಯಲ್ಲಿ 15 ಲಕ್ಷ, ಹೆಸ್ಕಾಂ ವ್ಯಾಪ್ತಿಯಲ್ಲಿ 28 ಲಕ್ಷ ಹಾಗೂ ಜೆಸ್ಕಾ ಅಡಿ 19 ಲಕ್ಷ ಸಂಪರ್ಕಗಳು ಸೇರಿ ಒಟ್ಟಾರೆ ಎಲ್ಲಾ ನಿಗಮಗಳ ಅಡಿ 1.70 ಕೋಟಿ ವಿದ್ಯುತ್‌ ಸಂಪರ್ಕಗಳಿದ್ದು, ಈ ಪೈಕಿ 1.20 ಕೋಟಿಯಷ್ಟು ಬಳಕೆದಾರರು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರಾಗಿದ್ದಾರೆ.

ಇವರೆಲ್ಲರಿಗೂ ಗೃಹಜ್ಯೋತಿ ಯೋಜನೆ ಜಾರಿಗೆ ಮಾಸಿಕ 1955 ಕೋಟಿ ರು.ನಂತೆ 23,400 ಕೋಟಿ ರು.ಗಳಷ್ಟುಅನುದಾನ ಬೇಕೆಂದು ತಿಳಿಸಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಗೃಹ ಬಳಕೆ ವಿದ್ಯುತ್‌ಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೇರೆ ಬೇರೆ ರೀತಿಯ ದರ ನಿಗದಿಪಡಿಸಲಾಗಿದೆ. ಆ ಪ್ರಕಾರ ಗೃಹಜ್ಯೋತಿ ಯೋಜನೆ ಜಾರಿಯಿಂದ ಮಾಸಿಕ ಗರಿಷ್ಠ 200 ಯುನಿಟ್‌ವರೆಗೆ ವಿದ್ಯುತ್‌ ಬಳಸುವ ಫಲಾನುಭವಿಗೆ ಗ್ರಾಮೀಣ ಭಾಗದಲ್ಲಿ 1000 ರು., ನಗರ ಪ್ರದೇಶದಲ್ಲಿ 1200 ರು. ನಷ್ಟುಉಳಿತಾಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

21 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

21 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago