ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಕರ್ನಾಟಕ 60,000-65,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
20 ಕ್ಕೂ ಹೆಚ್ಚು ಕಂಪನಿಗಳು ಹಸಿರು ಇಂಧನ ತಂತ್ರಜ್ಞಾನಗಳು, ಹಾರ್ಡ್ವೇರ್ ಉತ್ಪಾದನೆ, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಿವೆ ಎಂದು ಬೊಮ್ಮಾಯಿ ತಮ್ಮ ನಾಲ್ಕು ದಿನಗಳ ದಾವೋಸ್ ಪ್ರವಾಸದಿಂದ ಹಿಂದಿರುಗಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ತಂತ್ರಜ್ಞಾನದ ನೆಲೆ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಬಗ್ಗೆ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸವಿದೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯದಿಂದ ಆಕರ್ಷಿತವಾದ ಹೂಡಿಕೆಗಳನ್ನು ಪಟ್ಟಿ ಮಾಡಿದರು. ‘ಹೊಸ ತಂತ್ರಜ್ಞಾನಗಳ ಮೇಲೆ ಹೂಡಿಕೆಯನ್ನು ಕರ್ನಾಟಕದಲ್ಲಿ ಮಾತ್ರ ಮಾಡಲು ಸಾಧ್ಯ ಎಂದು ಉದ್ಯಮಿಗಳು ಭಾವಿಸುತ್ತಾರೆ’ ಎಂದು ಸಿಎಂ ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel