ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಕರ್ನಾಟಕ 60,000-65,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
20 ಕ್ಕೂ ಹೆಚ್ಚು ಕಂಪನಿಗಳು ಹಸಿರು ಇಂಧನ ತಂತ್ರಜ್ಞಾನಗಳು, ಹಾರ್ಡ್ವೇರ್ ಉತ್ಪಾದನೆ, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಿವೆ ಎಂದು ಬೊಮ್ಮಾಯಿ ತಮ್ಮ ನಾಲ್ಕು ದಿನಗಳ ದಾವೋಸ್ ಪ್ರವಾಸದಿಂದ ಹಿಂದಿರುಗಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ತಂತ್ರಜ್ಞಾನದ ನೆಲೆ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಬಗ್ಗೆ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸವಿದೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯದಿಂದ ಆಕರ್ಷಿತವಾದ ಹೂಡಿಕೆಗಳನ್ನು ಪಟ್ಟಿ ಮಾಡಿದರು. ‘ಹೊಸ ತಂತ್ರಜ್ಞಾನಗಳ ಮೇಲೆ ಹೂಡಿಕೆಯನ್ನು ಕರ್ನಾಟಕದಲ್ಲಿ ಮಾತ್ರ ಮಾಡಲು ಸಾಧ್ಯ ಎಂದು ಉದ್ಯಮಿಗಳು ಭಾವಿಸುತ್ತಾರೆ’ ಎಂದು ಸಿಎಂ ಹೇಳಿದರು.
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…