ಸೋತರೂ ಸುಳ್ಯದ ಅಭಿವೃದ್ಧಿಗೆ ದುಡಿಯುವೆ | ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ಹೇಳಿಕೆ |

May 17, 2023
8:09 PM

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್‌ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.

ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.

ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror