ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.
ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.
ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…