ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.
ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.
ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…