ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.
ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.
ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…