ಈ ಬಾರಿ ಅಭೂತಪೂರ್ವ ಗೆಲುವನ್ನು ಕ್ಷೇತ್ರದ ಜನತೆ ನೀಡಿದ್ದಾರೆ. ಈಗ ಕ್ಷೇತ್ರದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಗ್ರ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ನಾವು ಈ ಬಾರಿ ದಾಖಲೆಯ ಮೊತ್ತದ ಗೆಲುವುವನ್ನು ಪಡೆದುಕೊಂಡಿದ್ದೇವೆ. ಇದು ಕಾರ್ಯಕರ್ತರ ಗೆಲುವು, ಸಚಿವರಾಗಿದ್ದ ಅಂಗಾರರ ಅಭಿವೃದ್ಧಿಯ ಗೆಲುವು ಎಂದರು.
ಸುಳ್ಯದಲ್ಲಿ ಗೆಲುವುವಾಗಿದೆ ಎಂದು ನಾವು ನಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ, ಮುಂದೆ ಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಸಜ್ಜಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ ಸೋಲಾಗರಬಹುದು. ಮುಂದಿನ ದಿನಗಳಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ ವಿಶ್ವಾಸ ವ್ಯಕ್ತಪಡಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel