ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.
ತನ್ನ ವಯಸ್ಸಿನಿಂದಾಗಿ ನನ್ನ ಸ್ವರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದಾರೆ. ಈ ಕಾರಣದಿಂದ ಮುಂದೆ ನಾನು ಚುನಾವಣೆಯಲ್ಲಿ ಸ್ಫರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬಂಟ್ವಾಳದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಿದ್ದಿದ್ದರೂ ಸೋಲಾಗಿದೆ. ಸೋಲಿನ ಅವಲೋಕನ ನಡೆಸುತ್ತೇವೆ. ನಾನೆಂದೂ ಪಕ್ಷದ ಮಾತನ್ನು ಮೀರಿಲ್ಲ, ಮುಂದೆಯು ಮೀರುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷದ ಅಭೂತಪೂರ್ವ ಗೆಲುವಿನ ಹಿನ್ನಲೆ ಕಾರ್ಯಕರ್ತರು ಎದೆಗುಂದದೆ ಕಾರ್ಯನಿರ್ವಹಿಸಬೇಕು. ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel