4 ವರ್ಷದಲ್ಲಿ 170 ಕಾಂಗ್ರೆಸ್‌ ಶಾಸಕರು ಪಕ್ಷಾಂತರ…! | ಅಧಿಕಾರದ ಲಾಲಸೆಯೇ… ? ಅಭಿವೃದ್ಧಿಯ ಕನಸೇ…?

March 13, 2021
11:18 AM

ಕಳೆದ 4  ವರ್ಷದ ಅವಧಿಯಲ್ಲಿ  ಇಡೀ ದೇಶದಲ್ಲಿ   170 ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಪಕ್ಷಾಂತರ ಮಾಡಿದ್ದಾರೆ,  18  ಬಿಜೆಪಿ ಶಾಸಕರು ಬೇರೆ ಪಕ್ಷಕ್ಕೆ ತೆರಳಿದ್ದಾರೆ. ಹೀಗೊಂದು ವರದಿಯನ್ನು ಎಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್(ADR)‌ ಎಂಬ ಸಂಸ್ಥೆ ಅಧ್ಯಯನ ವರದಿಯನ್ನು  ಬಹಿರಂಗ ಮಾಡಿದೆ.

2016-20ರ ನಡುವೆ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 170 ಶಾಸಕರು ಮತ್ತೊಂದು ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಚುನಾವಣೆಗೆ ಬೇರೆ ಪಕ್ಷದಿಂದ ಸ್ಫರ್ಧೆ ಮಾಡಿದ್ದಾರೆ. ಎಲ್ಲಾ ಕಡೆಯಲ್ಲೂ ಅಸಮಾಧಾನಗಳು ಹಾಗೂ ಅಧಿಕಾರದ ಲಾಲಸೆ ಕಾರಣ ಎಂಬುದೂ ಇಲ್ಲಿ ಸ್ಪಷ್ಟವಾಗಿದೆ.

ಇಡೀ ದೇಶದಲ್ಲಿ 4  ವರ್ಷಗಳಲ್ಲಿ ವಿವಿಧ ಚುನಾವಣೆಗಳ ಸಂದರ್ಭ ಪ್ರಮುಖರಾದ ಸುಮಾರು 182 ಮಂದಿ ಬಿಜೆಪಿಗೆ ಸೇರ್ಪಡೆಗೊಂಡವು, 38 ಮಂದಿ ಕಾಂಗ್ರೆಸ್ ಸೇರಿಕೊಂಡರು. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಗೆ ಸೇರ್ಪಡೆಗೊಂಡಿವೆ ಎಂದು ಇನ್ನೊಂದು ವರದಿ ತಿಳಿಸಿದೆ.

ಈ ರೀತಿಯ ಪಕ್ಷಾಂತರ ಹಾಗೂ ಅಧಿಕಾರದ ಲಾಲಸೆಯ ಕಾರಣಗಳಿಂದ ಹಲವು ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರ ಕಳೆದಕೊಂಡದ್ದು ಹಾಗೂ ಬಹುಮತವಿಲ್ಲದೆ ಸರಕಾರದ ರಚನೆಗೆ ತೊಡಕು, ಅತಂತ್ರ ರಾಜಕೀಯ ವ್ಯವಸ್ಥೆ ಕಂಡುಬಂದಿರುವುದು ಕೂಡಾ ಗಮನಾರ್ಹವಾದ ಸಂಗತಿಯಾಗಿತ್ತು. ಈ ಅಂತತ್ರ ರಾಜಕೀಯ ವ್ಯವಸ್ಥೆಯು ಜನರಿಗೇ ಮತ್ತೆ ತೊಡಕಾಗುವುದು ಕೂಡಾ ಸ್ಪಷ್ಟವ ಆಗಿ ಕಾಣುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror