Advertisement
MIRROR FOCUS

4 ವರ್ಷದಲ್ಲಿ 170 ಕಾಂಗ್ರೆಸ್‌ ಶಾಸಕರು ಪಕ್ಷಾಂತರ…! | ಅಧಿಕಾರದ ಲಾಲಸೆಯೇ… ? ಅಭಿವೃದ್ಧಿಯ ಕನಸೇ…?

Share

ಕಳೆದ 4  ವರ್ಷದ ಅವಧಿಯಲ್ಲಿ  ಇಡೀ ದೇಶದಲ್ಲಿ   170 ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಪಕ್ಷಾಂತರ ಮಾಡಿದ್ದಾರೆ,  18  ಬಿಜೆಪಿ ಶಾಸಕರು ಬೇರೆ ಪಕ್ಷಕ್ಕೆ ತೆರಳಿದ್ದಾರೆ. ಹೀಗೊಂದು ವರದಿಯನ್ನು ಎಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್(ADR)‌ ಎಂಬ ಸಂಸ್ಥೆ ಅಧ್ಯಯನ ವರದಿಯನ್ನು  ಬಹಿರಂಗ ಮಾಡಿದೆ.

2016-20ರ ನಡುವೆ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 170 ಶಾಸಕರು ಮತ್ತೊಂದು ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಚುನಾವಣೆಗೆ ಬೇರೆ ಪಕ್ಷದಿಂದ ಸ್ಫರ್ಧೆ ಮಾಡಿದ್ದಾರೆ. ಎಲ್ಲಾ ಕಡೆಯಲ್ಲೂ ಅಸಮಾಧಾನಗಳು ಹಾಗೂ ಅಧಿಕಾರದ ಲಾಲಸೆ ಕಾರಣ ಎಂಬುದೂ ಇಲ್ಲಿ ಸ್ಪಷ್ಟವಾಗಿದೆ.

ಇಡೀ ದೇಶದಲ್ಲಿ 4  ವರ್ಷಗಳಲ್ಲಿ ವಿವಿಧ ಚುನಾವಣೆಗಳ ಸಂದರ್ಭ ಪ್ರಮುಖರಾದ ಸುಮಾರು 182 ಮಂದಿ ಬಿಜೆಪಿಗೆ ಸೇರ್ಪಡೆಗೊಂಡವು, 38 ಮಂದಿ ಕಾಂಗ್ರೆಸ್ ಸೇರಿಕೊಂಡರು. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಗೆ ಸೇರ್ಪಡೆಗೊಂಡಿವೆ ಎಂದು ಇನ್ನೊಂದು ವರದಿ ತಿಳಿಸಿದೆ.

ಈ ರೀತಿಯ ಪಕ್ಷಾಂತರ ಹಾಗೂ ಅಧಿಕಾರದ ಲಾಲಸೆಯ ಕಾರಣಗಳಿಂದ ಹಲವು ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರ ಕಳೆದಕೊಂಡದ್ದು ಹಾಗೂ ಬಹುಮತವಿಲ್ಲದೆ ಸರಕಾರದ ರಚನೆಗೆ ತೊಡಕು, ಅತಂತ್ರ ರಾಜಕೀಯ ವ್ಯವಸ್ಥೆ ಕಂಡುಬಂದಿರುವುದು ಕೂಡಾ ಗಮನಾರ್ಹವಾದ ಸಂಗತಿಯಾಗಿತ್ತು. ಈ ಅಂತತ್ರ ರಾಜಕೀಯ ವ್ಯವಸ್ಥೆಯು ಜನರಿಗೇ ಮತ್ತೆ ತೊಡಕಾಗುವುದು ಕೂಡಾ ಸ್ಪಷ್ಟವ ಆಗಿ ಕಾಣುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

8 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

9 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

9 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

14 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

17 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

21 hours ago