ಕಳೆದ 4 ವರ್ಷದ ಅವಧಿಯಲ್ಲಿ ಇಡೀ ದೇಶದಲ್ಲಿ 170 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಪಕ್ಷಾಂತರ ಮಾಡಿದ್ದಾರೆ, 18 ಬಿಜೆಪಿ ಶಾಸಕರು ಬೇರೆ ಪಕ್ಷಕ್ಕೆ ತೆರಳಿದ್ದಾರೆ. ಹೀಗೊಂದು ವರದಿಯನ್ನು ಎಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್(ADR) ಎಂಬ ಸಂಸ್ಥೆ ಅಧ್ಯಯನ ವರದಿಯನ್ನು ಬಹಿರಂಗ ಮಾಡಿದೆ.
2016-20ರ ನಡುವೆ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 170 ಶಾಸಕರು ಮತ್ತೊಂದು ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಚುನಾವಣೆಗೆ ಬೇರೆ ಪಕ್ಷದಿಂದ ಸ್ಫರ್ಧೆ ಮಾಡಿದ್ದಾರೆ. ಎಲ್ಲಾ ಕಡೆಯಲ್ಲೂ ಅಸಮಾಧಾನಗಳು ಹಾಗೂ ಅಧಿಕಾರದ ಲಾಲಸೆ ಕಾರಣ ಎಂಬುದೂ ಇಲ್ಲಿ ಸ್ಪಷ್ಟವಾಗಿದೆ.
ಇಡೀ ದೇಶದಲ್ಲಿ 4 ವರ್ಷಗಳಲ್ಲಿ ವಿವಿಧ ಚುನಾವಣೆಗಳ ಸಂದರ್ಭ ಪ್ರಮುಖರಾದ ಸುಮಾರು 182 ಮಂದಿ ಬಿಜೆಪಿಗೆ ಸೇರ್ಪಡೆಗೊಂಡವು, 38 ಮಂದಿ ಕಾಂಗ್ರೆಸ್ ಸೇರಿಕೊಂಡರು. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಗೆ ಸೇರ್ಪಡೆಗೊಂಡಿವೆ ಎಂದು ಇನ್ನೊಂದು ವರದಿ ತಿಳಿಸಿದೆ.
ಈ ರೀತಿಯ ಪಕ್ಷಾಂತರ ಹಾಗೂ ಅಧಿಕಾರದ ಲಾಲಸೆಯ ಕಾರಣಗಳಿಂದ ಹಲವು ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರ ಕಳೆದಕೊಂಡದ್ದು ಹಾಗೂ ಬಹುಮತವಿಲ್ಲದೆ ಸರಕಾರದ ರಚನೆಗೆ ತೊಡಕು, ಅತಂತ್ರ ರಾಜಕೀಯ ವ್ಯವಸ್ಥೆ ಕಂಡುಬಂದಿರುವುದು ಕೂಡಾ ಗಮನಾರ್ಹವಾದ ಸಂಗತಿಯಾಗಿತ್ತು. ಈ ಅಂತತ್ರ ರಾಜಕೀಯ ವ್ಯವಸ್ಥೆಯು ಜನರಿಗೇ ಮತ್ತೆ ತೊಡಕಾಗುವುದು ಕೂಡಾ ಸ್ಪಷ್ಟವ ಆಗಿ ಕಾಣುತ್ತಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…