ಕಳೆದ 4 ವರ್ಷದ ಅವಧಿಯಲ್ಲಿ ಇಡೀ ದೇಶದಲ್ಲಿ 170 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಪಕ್ಷಾಂತರ ಮಾಡಿದ್ದಾರೆ, 18 ಬಿಜೆಪಿ ಶಾಸಕರು ಬೇರೆ ಪಕ್ಷಕ್ಕೆ ತೆರಳಿದ್ದಾರೆ. ಹೀಗೊಂದು ವರದಿಯನ್ನು ಎಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್(ADR) ಎಂಬ ಸಂಸ್ಥೆ ಅಧ್ಯಯನ ವರದಿಯನ್ನು ಬಹಿರಂಗ ಮಾಡಿದೆ.
2016-20ರ ನಡುವೆ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 170 ಶಾಸಕರು ಮತ್ತೊಂದು ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಚುನಾವಣೆಗೆ ಬೇರೆ ಪಕ್ಷದಿಂದ ಸ್ಫರ್ಧೆ ಮಾಡಿದ್ದಾರೆ. ಎಲ್ಲಾ ಕಡೆಯಲ್ಲೂ ಅಸಮಾಧಾನಗಳು ಹಾಗೂ ಅಧಿಕಾರದ ಲಾಲಸೆ ಕಾರಣ ಎಂಬುದೂ ಇಲ್ಲಿ ಸ್ಪಷ್ಟವಾಗಿದೆ.
ಇಡೀ ದೇಶದಲ್ಲಿ 4 ವರ್ಷಗಳಲ್ಲಿ ವಿವಿಧ ಚುನಾವಣೆಗಳ ಸಂದರ್ಭ ಪ್ರಮುಖರಾದ ಸುಮಾರು 182 ಮಂದಿ ಬಿಜೆಪಿಗೆ ಸೇರ್ಪಡೆಗೊಂಡವು, 38 ಮಂದಿ ಕಾಂಗ್ರೆಸ್ ಸೇರಿಕೊಂಡರು. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಗೆ ಸೇರ್ಪಡೆಗೊಂಡಿವೆ ಎಂದು ಇನ್ನೊಂದು ವರದಿ ತಿಳಿಸಿದೆ.
ಈ ರೀತಿಯ ಪಕ್ಷಾಂತರ ಹಾಗೂ ಅಧಿಕಾರದ ಲಾಲಸೆಯ ಕಾರಣಗಳಿಂದ ಹಲವು ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರ ಕಳೆದಕೊಂಡದ್ದು ಹಾಗೂ ಬಹುಮತವಿಲ್ಲದೆ ಸರಕಾರದ ರಚನೆಗೆ ತೊಡಕು, ಅತಂತ್ರ ರಾಜಕೀಯ ವ್ಯವಸ್ಥೆ ಕಂಡುಬಂದಿರುವುದು ಕೂಡಾ ಗಮನಾರ್ಹವಾದ ಸಂಗತಿಯಾಗಿತ್ತು. ಈ ಅಂತತ್ರ ರಾಜಕೀಯ ವ್ಯವಸ್ಥೆಯು ಜನರಿಗೇ ಮತ್ತೆ ತೊಡಕಾಗುವುದು ಕೂಡಾ ಸ್ಪಷ್ಟವ ಆಗಿ ಕಾಣುತ್ತಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…