ಗುಜರಾತ್ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…