Advertisement
ರಾಷ್ಟ್ರೀಯ

ಗುಜರಾತ್ | ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ ಮೋದಿ |

Share

ಗುಜರಾತ್‌ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್‌ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.

ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

6 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

6 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

8 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

11 hours ago