ಗುಜರಾತ್ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…