ಗುಜರಾತ್ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…