ಭಾರತದಿಂದ 11,000 ಮೆಟ್ರಿಕ್‌ ಟನ್ ಅಕ್ಕಿ ಕೊಲಂಬೊಗೆ‌ ರವಾನೆ |

April 13, 2022
9:57 PM

ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು  ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್‌ ಟನ್‌ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.

ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್‌ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್  ಸುದ್ದಿಸಂಸ್ಥೆ ಎಎನ್‌ಐಗೆ   ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್‌ ಟನ್ ಅಕ್ಕಿ  ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ.  ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್‌ ಟನ್‌ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್‌ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್‌ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror