Advertisement
ರಾಷ್ಟ್ರೀಯ

ಭಾರತದಿಂದ 11,000 ಮೆಟ್ರಿಕ್‌ ಟನ್ ಅಕ್ಕಿ ಕೊಲಂಬೊಗೆ‌ ರವಾನೆ |

Share

ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು  ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್‌ ಟನ್‌ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.

ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್‌ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್  ಸುದ್ದಿಸಂಸ್ಥೆ ಎಎನ್‌ಐಗೆ   ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್‌ ಟನ್ ಅಕ್ಕಿ  ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ.  ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್‌ ಟನ್‌ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್‌ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್‌ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

38 minutes ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

17 hours ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

2 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

2 days ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

2 days ago