ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್ ಟನ್ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.
ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್ ಸುದ್ದಿಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್ ಟನ್ ಅಕ್ಕಿ ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ. ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್ ಟನ್ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?