ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್ ಟನ್ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.
ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್ ಸುದ್ದಿಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್ ಟನ್ ಅಕ್ಕಿ ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ. ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್ ಟನ್ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…