ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್ ಟನ್ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.
ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್ ಸುದ್ದಿಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್ ಟನ್ ಅಕ್ಕಿ ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ. ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್ ಟನ್ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…