ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್ ಟನ್ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.
ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್ ಸುದ್ದಿಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್ ಟನ್ ಅಕ್ಕಿ ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ. ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್ ಟನ್ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…