ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್ ಟನ್ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.
ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್ ಸುದ್ದಿಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್ ಟನ್ ಅಕ್ಕಿ ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ. ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್ ಟನ್ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.