ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್ ಟನ್ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.
ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್ ಸುದ್ದಿಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್ ಟನ್ ಅಕ್ಕಿ ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ. ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್ ಟನ್ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…