#KSRTC | ಸರ್ಕಾರಿ ಬಸ್ಸು ಹೀಗೆ ಹೊಗೆ ಉಗುಳಿದರೆ ಹೇಗೆ….? |

September 30, 2023
5:29 PM
ರಸ್ತೆಯುದ್ದಕ್ಕೂ ಕೆಎಸ್‌ಆರ್‌ಟಿಸಿ ಬಸ್ಸು ವಿಪರೀತ ಹೊಗೆ ಉಗುಳುತ್ತಾ ಹೋಗುತ್ತಿರುವ ದೃಶ್ಯ ಈಗ ಹೆಚ್ಚಾಗಿ ಕಾಣುತ್ತಿದೆ. ಈ ಬಗ್ಗೆ ಇಲಾಖೆಗಳು ಗಮನಹರಿಸಬೇಕಿದೆ.

ಕೆಎಸ್‌ಆರ್‌ಟಿಸಿ ಬಸ್ಸು ಇದು. ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…!. ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ..!. ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ…?

Advertisement

Advertisement

ಮಂಗಳೂರು-ಕುಕ್ಕೆ ಸುಬ್ರಹ್ಮಣ್ಯ ಓಡಾಡುವ ಕೆಎಸ್‌ಆರ್‌ಟಿಸಿ  ಬಸ್ಸು ಇದು. ಈ ಬಸ್ಸಿನ ಹಿಂದೆ ಹೋದವರ ಪಾಡು ಅಷ್ಟೇ. ವಿಪರೀತವಾಗಿ ಗೊಗೆ ಉಗುಳುತ್ತದೆ. ಇದಕ್ಕೆ ಏನು ಕಾರಣ ಎಂದು ಇಲಾಖೆಗಳೇ ಹೇಳಬೇಕಷ್ಟೆ. ಹಿಂದೊಮ್ಮೆ ಇದೇ ರೀತಿ ಹೊಗೆ ಉಗುಳುವ ಬಸ್ಸು ಕಂಡುಬಂದಾಗ ಇಲಾಖೆಯ ಗಮನಕ್ಕೆ ಸಾರ್ವಜನಿಕರೊಬ್ಬರು ತಂದಿದ್ದರು. ಆಗ ಬಂದಿರುವ ಉತ್ತರ , ಬಸ್ಸು ನಿಲ್ದಾಣದಿಂದ ಹೊರಡುವಾಗ ಸರಿ ಇತ್ತು, ದಾರಿ ಮಧ್ಯದಲ್ಲಿ ವಾಹನದ ಭಾಗವೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೊಗೆ ಬರಲು ಆರಂಭವಾಗಿದೆ ಎಂದು ಉತ್ತರ ನೀಡಿತ್ತು ಇಲಾಖೆ. ಆದರೆ ದಿನವೂ ಅನೇಕ ಕೆಎಸ್‌ಆರ್‌ಟಿಸಿ ಬಸ್ಸುಗಳು ಇದೇ ಮಾದರಿಯಲ್ಲಿ ಹೊಗೆ ಬಿಡುತ್ತಾ ಸಾಗುತ್ತಿದೆ. ಸರ್ಕಾರ ಉಚಿತ ನೀಡುವಷ್ಟೇ ಗಂಭೀರವಾಗಿ ಮಾಲಿನ್ಯ ನಿಯಂತ್ರಣದ ಕಡೆಗೂ ಗಮನಹರಿಸಬೇಕು ಎನ್ನುವುದು  ಕಾಳಜಿ ಅಷ್ಟೇ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ
July 21, 2025
7:11 AM
by: The Rural Mirror ಸುದ್ದಿಜಾಲ
ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ
July 21, 2025
6:58 AM
by: The Rural Mirror ಸುದ್ದಿಜಾಲ
ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ
July 21, 2025
6:52 AM
by: The Rural Mirror ಸುದ್ದಿಜಾಲ
ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ
July 21, 2025
6:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group