ಕೆಎಸ್ಆರ್ಟಿಸಿ ಬಸ್ಸು ಇದು. ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…!. ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ..!. ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ…?
ಮಂಗಳೂರು-ಕುಕ್ಕೆ ಸುಬ್ರಹ್ಮಣ್ಯ ಓಡಾಡುವ ಕೆಎಸ್ಆರ್ಟಿಸಿ ಬಸ್ಸು ಇದು. ಈ ಬಸ್ಸಿನ ಹಿಂದೆ ಹೋದವರ ಪಾಡು ಅಷ್ಟೇ. ವಿಪರೀತವಾಗಿ ಗೊಗೆ ಉಗುಳುತ್ತದೆ. ಇದಕ್ಕೆ ಏನು ಕಾರಣ ಎಂದು ಇಲಾಖೆಗಳೇ ಹೇಳಬೇಕಷ್ಟೆ. ಹಿಂದೊಮ್ಮೆ ಇದೇ ರೀತಿ ಹೊಗೆ ಉಗುಳುವ ಬಸ್ಸು ಕಂಡುಬಂದಾಗ ಇಲಾಖೆಯ ಗಮನಕ್ಕೆ ಸಾರ್ವಜನಿಕರೊಬ್ಬರು ತಂದಿದ್ದರು. ಆಗ ಬಂದಿರುವ ಉತ್ತರ , ಬಸ್ಸು ನಿಲ್ದಾಣದಿಂದ ಹೊರಡುವಾಗ ಸರಿ ಇತ್ತು, ದಾರಿ ಮಧ್ಯದಲ್ಲಿ ವಾಹನದ ಭಾಗವೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೊಗೆ ಬರಲು ಆರಂಭವಾಗಿದೆ ಎಂದು ಉತ್ತರ ನೀಡಿತ್ತು ಇಲಾಖೆ. ಆದರೆ ದಿನವೂ ಅನೇಕ ಕೆಎಸ್ಆರ್ಟಿಸಿ ಬಸ್ಸುಗಳು ಇದೇ ಮಾದರಿಯಲ್ಲಿ ಹೊಗೆ ಬಿಡುತ್ತಾ ಸಾಗುತ್ತಿದೆ. ಸರ್ಕಾರ ಉಚಿತ ನೀಡುವಷ್ಟೇ ಗಂಭೀರವಾಗಿ ಮಾಲಿನ್ಯ ನಿಯಂತ್ರಣದ ಕಡೆಗೂ ಗಮನಹರಿಸಬೇಕು ಎನ್ನುವುದು ಕಾಳಜಿ ಅಷ್ಟೇ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…