ಕೆಎಸ್ಆರ್ಟಿಸಿ ಬಸ್ಸು ಇದು. ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…!. ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ..!. ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ…?
ಮಂಗಳೂರು-ಕುಕ್ಕೆ ಸುಬ್ರಹ್ಮಣ್ಯ ಓಡಾಡುವ ಕೆಎಸ್ಆರ್ಟಿಸಿ ಬಸ್ಸು ಇದು. ಈ ಬಸ್ಸಿನ ಹಿಂದೆ ಹೋದವರ ಪಾಡು ಅಷ್ಟೇ. ವಿಪರೀತವಾಗಿ ಗೊಗೆ ಉಗುಳುತ್ತದೆ. ಇದಕ್ಕೆ ಏನು ಕಾರಣ ಎಂದು ಇಲಾಖೆಗಳೇ ಹೇಳಬೇಕಷ್ಟೆ. ಹಿಂದೊಮ್ಮೆ ಇದೇ ರೀತಿ ಹೊಗೆ ಉಗುಳುವ ಬಸ್ಸು ಕಂಡುಬಂದಾಗ ಇಲಾಖೆಯ ಗಮನಕ್ಕೆ ಸಾರ್ವಜನಿಕರೊಬ್ಬರು ತಂದಿದ್ದರು. ಆಗ ಬಂದಿರುವ ಉತ್ತರ , ಬಸ್ಸು ನಿಲ್ದಾಣದಿಂದ ಹೊರಡುವಾಗ ಸರಿ ಇತ್ತು, ದಾರಿ ಮಧ್ಯದಲ್ಲಿ ವಾಹನದ ಭಾಗವೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೊಗೆ ಬರಲು ಆರಂಭವಾಗಿದೆ ಎಂದು ಉತ್ತರ ನೀಡಿತ್ತು ಇಲಾಖೆ. ಆದರೆ ದಿನವೂ ಅನೇಕ ಕೆಎಸ್ಆರ್ಟಿಸಿ ಬಸ್ಸುಗಳು ಇದೇ ಮಾದರಿಯಲ್ಲಿ ಹೊಗೆ ಬಿಡುತ್ತಾ ಸಾಗುತ್ತಿದೆ. ಸರ್ಕಾರ ಉಚಿತ ನೀಡುವಷ್ಟೇ ಗಂಭೀರವಾಗಿ ಮಾಲಿನ್ಯ ನಿಯಂತ್ರಣದ ಕಡೆಗೂ ಗಮನಹರಿಸಬೇಕು ಎನ್ನುವುದು ಕಾಳಜಿ ಅಷ್ಟೇ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…