ಕೆಎಸ್ಆರ್ಟಿಸಿ ಬಸ್ಸು ಇದು. ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…!. ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ..!. ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ…?
ಮಂಗಳೂರು-ಕುಕ್ಕೆ ಸುಬ್ರಹ್ಮಣ್ಯ ಓಡಾಡುವ ಕೆಎಸ್ಆರ್ಟಿಸಿ ಬಸ್ಸು ಇದು. ಈ ಬಸ್ಸಿನ ಹಿಂದೆ ಹೋದವರ ಪಾಡು ಅಷ್ಟೇ. ವಿಪರೀತವಾಗಿ ಗೊಗೆ ಉಗುಳುತ್ತದೆ. ಇದಕ್ಕೆ ಏನು ಕಾರಣ ಎಂದು ಇಲಾಖೆಗಳೇ ಹೇಳಬೇಕಷ್ಟೆ. ಹಿಂದೊಮ್ಮೆ ಇದೇ ರೀತಿ ಹೊಗೆ ಉಗುಳುವ ಬಸ್ಸು ಕಂಡುಬಂದಾಗ ಇಲಾಖೆಯ ಗಮನಕ್ಕೆ ಸಾರ್ವಜನಿಕರೊಬ್ಬರು ತಂದಿದ್ದರು. ಆಗ ಬಂದಿರುವ ಉತ್ತರ , ಬಸ್ಸು ನಿಲ್ದಾಣದಿಂದ ಹೊರಡುವಾಗ ಸರಿ ಇತ್ತು, ದಾರಿ ಮಧ್ಯದಲ್ಲಿ ವಾಹನದ ಭಾಗವೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೊಗೆ ಬರಲು ಆರಂಭವಾಗಿದೆ ಎಂದು ಉತ್ತರ ನೀಡಿತ್ತು ಇಲಾಖೆ. ಆದರೆ ದಿನವೂ ಅನೇಕ ಕೆಎಸ್ಆರ್ಟಿಸಿ ಬಸ್ಸುಗಳು ಇದೇ ಮಾದರಿಯಲ್ಲಿ ಹೊಗೆ ಬಿಡುತ್ತಾ ಸಾಗುತ್ತಿದೆ. ಸರ್ಕಾರ ಉಚಿತ ನೀಡುವಷ್ಟೇ ಗಂಭೀರವಾಗಿ ಮಾಲಿನ್ಯ ನಿಯಂತ್ರಣದ ಕಡೆಗೂ ಗಮನಹರಿಸಬೇಕು ಎನ್ನುವುದು ಕಾಳಜಿ ಅಷ್ಟೇ.
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…