ಕೆಎಸ್ಆರ್ಟಿಸಿ ಬಸ್ಸು ಇದು. ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…!. ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ..!. ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ…?
ಮಂಗಳೂರು-ಕುಕ್ಕೆ ಸುಬ್ರಹ್ಮಣ್ಯ ಓಡಾಡುವ ಕೆಎಸ್ಆರ್ಟಿಸಿ ಬಸ್ಸು ಇದು. ಈ ಬಸ್ಸಿನ ಹಿಂದೆ ಹೋದವರ ಪಾಡು ಅಷ್ಟೇ. ವಿಪರೀತವಾಗಿ ಗೊಗೆ ಉಗುಳುತ್ತದೆ. ಇದಕ್ಕೆ ಏನು ಕಾರಣ ಎಂದು ಇಲಾಖೆಗಳೇ ಹೇಳಬೇಕಷ್ಟೆ. ಹಿಂದೊಮ್ಮೆ ಇದೇ ರೀತಿ ಹೊಗೆ ಉಗುಳುವ ಬಸ್ಸು ಕಂಡುಬಂದಾಗ ಇಲಾಖೆಯ ಗಮನಕ್ಕೆ ಸಾರ್ವಜನಿಕರೊಬ್ಬರು ತಂದಿದ್ದರು. ಆಗ ಬಂದಿರುವ ಉತ್ತರ , ಬಸ್ಸು ನಿಲ್ದಾಣದಿಂದ ಹೊರಡುವಾಗ ಸರಿ ಇತ್ತು, ದಾರಿ ಮಧ್ಯದಲ್ಲಿ ವಾಹನದ ಭಾಗವೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೊಗೆ ಬರಲು ಆರಂಭವಾಗಿದೆ ಎಂದು ಉತ್ತರ ನೀಡಿತ್ತು ಇಲಾಖೆ. ಆದರೆ ದಿನವೂ ಅನೇಕ ಕೆಎಸ್ಆರ್ಟಿಸಿ ಬಸ್ಸುಗಳು ಇದೇ ಮಾದರಿಯಲ್ಲಿ ಹೊಗೆ ಬಿಡುತ್ತಾ ಸಾಗುತ್ತಿದೆ. ಸರ್ಕಾರ ಉಚಿತ ನೀಡುವಷ್ಟೇ ಗಂಭೀರವಾಗಿ ಮಾಲಿನ್ಯ ನಿಯಂತ್ರಣದ ಕಡೆಗೂ ಗಮನಹರಿಸಬೇಕು ಎನ್ನುವುದು ಕಾಳಜಿ ಅಷ್ಟೇ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…